ಬ್ರೇಕಿಂಗ್ ನ್ಯೂಸ್
18-03-26 11:38 am HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 18: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಮಗು ಪ್ರಿಯಾಂಕಾ ಸಾವಿನ ಹಿಂದೆ ತಂದೆಯೇ ವಿಷಪ್ರಾಶನ ಮಾಡಿರುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ ಮಗು ಮತ್ತು ಪತ್ನಿಯನ್ನು ಭೇಟಿ ಮಾಡಲು ತಂದೆ ಭೀಮರಾಯ ಬಂದಿದ್ದಾನೆ. ಸ್ವಲ್ಪ ಸಮಯ ಪತ್ನಿ ಹಾಗೂ ಮಗುವಿನೊಂದಿಗೆ ಸಮಯ ಕಳೆದು ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಉದ್ಭವಿಸಿದ ಬೆನ್ನಲ್ಲೇ ತಂದೆಯ ವರ್ತನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಭೀಮರಾಯ ಸಣ್ಣ ಮಾತ್ರೆ ತಂದು ಅದರಿಂದ ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಭೀಮರಾಯ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm