ಬ್ರೇಕಿಂಗ್ ನ್ಯೂಸ್
18-03-26 11:38 am HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 18: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಮಗು ಪ್ರಿಯಾಂಕಾ ಸಾವಿನ ಹಿಂದೆ ತಂದೆಯೇ ವಿಷಪ್ರಾಶನ ಮಾಡಿರುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ ಮಗು ಮತ್ತು ಪತ್ನಿಯನ್ನು ಭೇಟಿ ಮಾಡಲು ತಂದೆ ಭೀಮರಾಯ ಬಂದಿದ್ದಾನೆ. ಸ್ವಲ್ಪ ಸಮಯ ಪತ್ನಿ ಹಾಗೂ ಮಗುವಿನೊಂದಿಗೆ ಸಮಯ ಕಳೆದು ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಉದ್ಭವಿಸಿದ ಬೆನ್ನಲ್ಲೇ ತಂದೆಯ ವರ್ತನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಭೀಮರಾಯ ಸಣ್ಣ ಮಾತ್ರೆ ತಂದು ಅದರಿಂದ ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಭೀಮರಾಯ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm