ಬ್ರೇಕಿಂಗ್ ನ್ಯೂಸ್
18-03-26 12:17 pm HK News Staffer ಕರ್ನಾಟಕ
ಹಾಸನ, ಮಾರ್ಚ್ 18: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ವಿಸ್ತೃತ ಚಾರ್ಜ್ಶೀಟ್ ಸಲ್ಲಿಸಿದ್ದು, ಪ್ರಕರಣದ ವ್ಯಾಪ್ತಿ ಮತ್ತು ಗಂಭೀರತೆಯನ್ನು ಸ್ಪಷ್ಟಪಡಿಸಿದೆ.
ದೋಷಾರೋಪ ಪಟ್ಟಿಯಲ್ಲಿ ಒಟ್ಟು 52 ಮಂದಿಯ ಹೆಸರು ಉಲ್ಲೇಖವಾಗಿದ್ದು, ಅವರಲ್ಲಿ 39 ಮಂದಿಯ ವಿರುದ್ಧ ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಗಳು ಸಾಬೀತಾಗಿವೆ ಎಂದು SIT ತಿಳಿಸಿದೆ. ಪ್ರಕರಣದ ತನಿಖೆ 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಆರಂಭವಾಗಿತ್ತು.
ತನಿಖೆ ವೇಳೆ ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್ಡ್ರೈವ್ಗಳನ್ನು ಖರೀದಿಸಿ, ಅವುಗಳ ಮೂಲಕ ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿ ಹಂಚಿಕೆ ಮಾಡಿರುವುದು ಪತ್ತೆಯಾಗಿದೆ. ಪ್ರಕರಣದಲ್ಲಿ 277 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಡಿಜಿಟಲ್ ಸಾಕ್ಷ್ಯಗಳು, ಕಾಲ್ ಡೇಟಾ ವಿಶ್ಲೇಷಣೆ ಮತ್ತು ಫೋರೆನ್ಸಿಕ್ ಸೈನ್ಸ್ ಲ್ಯಾಬ್ (FSL) ವರದಿಗಳನ್ನು ಆಧರಿಸಿ ಆರೋಪಗಳನ್ನೂ ದೃಢಪಡಿಸಲಾಗಿದೆ.
ಚಾರ್ಜ್ಶೀಟ್ನಲ್ಲಿ ಎ1 ನವೀನ್, ಎ2 ಕಾರ್ತಿಕ್ ಎನ್ (ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ), ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಹೆಸರುಗಳು ಸೇರಿವೆ. ವಿವಿಧ ರಾಜಕೀಯ ಹಿನ್ನೆಲೆಯ ವ್ಯಕ್ತಿಗಳೂ ಪ್ರಕರಣದಲ್ಲಿ ಭಾಗಿಯಾಗಿರುವುದು ಗಮನಾರ್ಹವಾಗಿದ್ದು, ಬಿಜೆಪಿ ನಾಯಕ ಪ್ರೀತಂ ಗೌಡ ಸೇರಿದಂತೆ ಕೆಲವು ರಾಜಕೀಯ ಕಾರ್ಯಕರ್ತರ ವಿರುದ್ಧದ ಆರೋಪಗಳನ್ನೂ SIT ದೃಢಪಡಿಸಿದೆ.
ತನಿಖೆಯ ಪ್ರಕಾರ, ಮಹಿಳೆಯರ ಸಮ್ಮತಿಯಿಲ್ಲದೆ ಮೊಬೈಲ್ ಸಾಧನಗಳ ಮೂಲಕ ವಿಡಿಯೋ ಚಿತ್ರೀಕರಿಸಿ, ಬಳಿಕ ಪೆನ್ಡ್ರೈವ್ಗಳ ಮೂಲಕ ಅವುಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಕೆಲವು ಆರೋಪಿಗಳು ತಮ್ಮ ವೈಯಕ್ತಿಕ ಮೊಬೈಲ್ಗಳಿಂದಲೂ ಈ ವಿಡಿಯೋಗಳನ್ನು ಇತರರಿಗೆ ರವಾನಿಸಿರುವುದನ್ನು ಡಿಜಿಟಲ್ ಟ್ರೇಸ್ಗಳಿಂದ ಪತ್ತೆಹಚ್ಚಲಾಗಿದೆ.
ಪ್ರಕರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿಬಂದಿದ್ದ ಪ್ರಜ್ವಲ್ ರೇವಣ್ಣ ಅವರ ಹೆಸರು ಈ ಹಂತದ ಚಾರ್ಜ್ಶೀಟ್ನಲ್ಲಿ ಸೇರಿಸದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಇದರಿಂದ ಪ್ರಕರಣದ ಮುಂದಿನ ಹಂತದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ರಕರಣದ ಗಂಭೀರತೆ, ವ್ಯಾಪಕ ಡಿಜಿಟಲ್ ಸಾಕ್ಷ್ಯಾಧಾರಗಳು ಹಾಗೂ ರಾಜಕೀಯ ಸಂಪರ್ಕಗಳ ಹಿನ್ನೆಲೆ, ಮುಂದಿನ ನ್ಯಾಯಾಲಯದ ವಿಚಾರಣೆಗಳು ನಿರ್ಣಾಯಕವಾಗಲಿವೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am