ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm