ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am