ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm