ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm