ಬ್ರೇಕಿಂಗ್ ನ್ಯೂಸ್
20-03-26 12:00 pm HK News Staffer ಕರ್ನಾಟಕ
ಹುಬ್ಬಳ್ಳಿ, ಮಾರ್ಚ್ 20: ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚಾಟ ಮತ್ತೊಂದು ಅಮಾಯಕ ಜೀವ ಬಲಿ ಪಡೆದಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸ್ಟಂಟ್ ಹಾಗೂ ಕ್ರ್ಯಾಶ್ ರೀಲ್ಸ್ ಚಿತ್ರೀಕರಣದ ವೇಳೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ (15) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಲಕ್ಷ್ಮಿ ನಗರ ನಿವಾಸಿಯಾದ ನಮೀಷ, ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದನು. ಯುಗಾದಿ ಹಬ್ಬದ ನಿಮಿತ್ತ ಊರಿಗೆ ಬಂದಿದ್ದ ಆತ, ಗೆಳೆಯರೊಂದಿಗೆ ರೀಲ್ಸ್ ಮಾಡಲು ಸೇಜವಾಡಕ್ಕರ್ ಪ್ಲಾಟ್ಗೆ ತೆರಳಿದ್ದನು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್ಗೆ ಗುದ್ದಿದೆ. ಪರಿಣಾಮ ನಮೀಷ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆಯೇ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಲಾಯಿಸಿದ್ದ ಅಪ್ರಾಪ್ತನನ್ನು ವಿಚಾರಣೆಗೊಳಪಡಿಸಲಾಗಿದೆ. ಯುಗಾದಿ ಸಂಭ್ರಮದಲ್ಲಿದ್ದ ಮನೆಗೆ ದುಃಖದ ನೆರಳು ಆವರಿಸಿದ್ದು, ಮಗನ ಅಕಾಲಿಕ ಮರಣದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm