ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm