ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm