ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am