ಬ್ರೇಕಿಂಗ್ ನ್ಯೂಸ್
24-03-26 02:55 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 24: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಯನ್ನು ಬಹಿರಂಗವಾಗಿ ಪ್ರತಿಪಾದಿಸುವ ಮತ್ತು ಆಚರಿಸುವ ವ್ಯಕ್ತಿಯು ಪರಿಶಿಷ್ಟ ಜಾತಿ ಸಮುದಾಯದ ಸೌಲಭ್ಯವನ್ನು ಪಡೆಯುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ಪೀಠವು ಈ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ, ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಕ್ರಿಶ್ಚಿಯನ್ ಧರ್ಮದಿಂದ ತಮ್ಮ ಮೂಲ ಧರ್ಮಕ್ಕೆ ಮರು ಮತಾಂತರಗೊಂಡಿಲ್ಲ. ಹಾಗಿರುವಾಗ ಎಸ್ಸಿ-ಎಸ್ಟಿ ಮೀಸಲಾತಿ ಸೌಲಭ್ಯ ಪಡೆಯಲಾಗದು ಎಂದು ಪೀಠ ಹೇಳಿದೆ.

ಅರ್ಜಿದಾರ ವ್ಯಕ್ತಿ ಒಂದು ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿ ಕಾರ್ಯ ನಿರ್ವಹಿಸಿದ್ದಲ್ಲದೆ, ಹಳ್ಳಿಯ ಮನೆಗಳಲ್ಲಿ ನಿಯಮಿತವಾಗಿ ಭಾನುವಾರ ಪ್ರಾರ್ಥನೆಗಳನ್ನು ನಡೆಸುತ್ತಿದ್ದರು ಎಂದು ಕೋರ್ಟ್ ಗಮನಕ್ಕೆ ತರಲಾಗಿತ್ತು. ವಾದಗಳನ್ನು ಆಲಿಸಿದ ನ್ಯಾಯಾಲಯವು, 'ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವುದರಿಂದ ಆ ವ್ಯಕ್ತಿಯ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದುಗೊಳ್ಳುತ್ತದೆ' ಎಂದು ಮಹತ್ವದ ತೀರ್ಪು ನೀಡಿತು.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದ ವ್ಯಕ್ತಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾದ ಕೆಲವು ವ್ಯಕ್ತಿಗಳ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿದ್ದ ಅರ್ಜಿಯಲ್ಲಿ ಹೈಕೋರ್ಟ್ ಮತಾಂತರ ಆದವರಿಗೆ ಎಸ್ಸಿ-ಎಸ್ಟಿ ಸೌಲಭ್ಯ ಪಡೆಯಲಾಗದು ಎಂದು ಹೇಳಿತ್ತು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am