ಬ್ರೇಕಿಂಗ್ ನ್ಯೂಸ್
26-03-26 11:14 am HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಪುರಂ ಸಮೀಪದಲ್ಲಿ ಮಾಯಾವರಂ ಎಂಬಲ್ಲಿ ಖಾಸಗಿ ಬಸ್ ಮತ್ತು ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು 13 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಭೀಕರ ಸಾವಿಗೀಡಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು ಇದರಿಂದಾಗಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ತೆಲಂಗಾಣದ ಜಗಿತ್ಯಾಲ್ನಿಂದ ನೆಲ್ಲೂರು ಜಿಲ್ಲೆಯ ಕಲಿಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಒಟ್ಟು 41 ಪ್ರಯಾಣಿಕರಿದ್ದರು. ಇಂದು ಬೆಳಗ್ಗೆ 5.30ರಿಂದ 6 ಗಂಟೆ ನಡುವೆ ಮಾರ್ಕಪುರಂ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಟ್ರಕ್ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಬೆನ್ನಲ್ಲೇ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಆವರಿಸಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ದು 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಒಟ್ಟು 25 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಕೂಡಲೇ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿ. ಹರ್ಷವರ್ಧನ್ ರಾಜು ತಿಳಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಕಳೆದೊಂದು ವರ್ಷದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳಾಗಿದ್ದು ಒಟ್ಟು 8200 ಜೀವ ಹಾನಿಯಾದ ಅಪಘಾತಗಳಾಗಿವೆ ಎಂದು ಪೊಲೀಸರ ಅಂಕಿ ಸಂಖ್ಯೆಗಳು ತಿಳಿಸುತ್ತವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm