ಬ್ರೇಕಿಂಗ್ ನ್ಯೂಸ್
26-03-26 09:21 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಮಾರ್ಚ್ 25ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವ ಜೊತೆಗೆ ಬ್ಯಾಚ್ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಹಂಚುವ ಬಗ್ಗೆ ಹೇಳಿರುವುದು ಕಂಡುಬಂದಿದೆ.
ಘಟನೆಯ ಬಳಿಕ, ವಿದ್ಯಾರ್ಥಿನಿ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಾಂಶುಪಾಲರ ಬಳಿ ತೆರಳುವುದಾಗಿ ಹೇಳಿದ್ದಾಳೆ. ಈ ವೇಳೆ, “ನೀನೇ ಮೊದಲು ಪ್ರಪೋಸ್ ಮಾಡಿದ್ದೆ” ಎಂದು ಪ್ರಾಧ್ಯಾಪಕ ಹೇಳಿರುವುದು ಹಾಗೂ ಸಿಸಿಟಿವಿ ದೃಶ್ಯಗಳ ಬಗ್ಗೆ ಉಲ್ಲೇಖಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿದ್ಯಾರ್ಥಿನಿ ಅದನ್ನು ತಳ್ಳಿಹಾಕಿ ಸಿಸಿಟಿವಿ ದೃಶ್ಯ ತೋರಿಸಲು ಒತ್ತಾಯಿಸಿದಾಗ, “ನಾಳೆ ಮಾತನಾಡೋಣ” ಎಂದು ಪ್ರಾಧ್ಯಾಪಕ ಹೇಳಿ ಸ್ಥಳದಿಂದ ಹೊರಟಿರುವುದು ಕೂಡ ದೃಶ್ಯಗಳಲ್ಲಿ ಕಂಡುಬಂದಿದೆ.
ಈ ಘಟನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ಹಾಗೂ ಸಹಪಾಠಿಗಳು ತರಗತಿಯಿಂದ ಹೊರಬಂದ ಬಳಿಕ ಪ್ರಾಧ್ಯಾಪಕನನ್ನು ಸುತ್ತುವರೆದು ಪ್ರಶ್ನಿಸಿದ್ದು, ಈ ವೇಳೆ ತುಸು ಗಲಾಟೆ ನಡೆದಿದೆ. ಅಲ್ಲದೆ ಪ್ರಾಧ್ಯಾಪಕನ ಮೇಲೆ ನಲ್ಲೆ ನಡೆದಿದ್ದು ಈ ವೇಳೆ ಪ್ರಾಧ್ಯಾಪಕ ಎಸ್ಕೇಪ್ ಆಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ. ತರಗತಿ ಕೊಠಡಿಯಂತಹ ಶೈಕ್ಷಣಿಕ ವಾತಾವರಣದಲ್ಲಿ ನಡೆದ ಈ ರೀತಿಯ ಘಟನೆ ಸಮಾಜದಲ್ಲಿ ಆತಂಕವನ್ನು ಹುಟ್ಟಿಸಿದ್ದು, ಕಾಲೇಜುಗಳಲ್ಲಿ ನೈತಿಕತೆ ಮತ್ತು ಭದ್ರತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
An incident at Siddhartha Medical College in T. Beguru village of Nelamangala taluk has sparked major unrest, leading to a tense situation on campus.
— Hate Detector 🔍 (@HateDetectors) March 26, 2026
The college is owned by Karnataka Home Minister Dr. G. Parameshwara, and the episode has triggered intense public debate.… https://t.co/80mXUGmMtU pic.twitter.com/VBqXiFVMN5
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm