ಬ್ರೇಕಿಂಗ್ ನ್ಯೂಸ್
27-03-26 03:52 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 27: ನಗರದಲ್ಲಿ ಹಾಡುಹಗಲೇ ನಡೆದ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಅಫಜಲಪುರ ತಾಲ್ಲೂಕಿನ ಬಳುರಗಿ ಬಳಿ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿ ಬಳಿಕ ಶವದ ಮೇಲೆ ಕಾರು ಹತ್ತಿಸಿ ಭೀಕರತೆ ಮೆರೆದಿದ್ದಾನೆ.
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ನಡುರಸ್ತೆಯಲ್ಲೇ ಆಕೆಯನ್ನು ಭಾರೀವಾಗಿ ಹತ್ಯೆ ಮಾಡಿದ್ದಾನೆ. ರಸ್ತೆಯಲ್ಲಿ ಹೋಗುವವರೆಲ್ಲಾ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರೂ ಆತ ಯಾವುದೇ ಅಳುಕಿಲ್ಲದೆ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರೀಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಧಾವಿಸಿಲ್ಲ ಎಂಬುದು ವಿಪರ್ಯಾಸ.
ಕುಡುಗೋಲಿನಿಂದ ಕತ್ತು ಕತ್ತರಿಸಿದ ಭೂಪ!
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ಆಕೆಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಕತ್ತನ್ನು ಕತ್ತರಿಸಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದ ಮಹಿಳೆ ನೋಡ ನೋಡುತ್ತಲೇ ಪ್ರಾಣಿ ಬಿಟ್ಟಿದ್ದಾಳೆ. ಈ ಭೀಕರ ಹತ್ಯೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ.
ಪತ್ನಿಯನ್ನು ಕೊಂದ ಬಳಿಕವೂ ಸುಮ್ಮನಾಗದ ಕಿರಾತಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ಮಹಾರಾಷ್ಟ್ರದ ಬಾರಾಮತಿಯಿಂದ ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ಪತ್ನಿಯನ್ನು ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಆದರೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ್ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಭಾರೀವಾಗಿ ಹತ್ಯೆ ಮಾಡಿದ್ದಾನೆ.
ಘಟನೆ ನಡೆದ ವೇಳೆ ಕಾರಿನಲ್ಲಿ ಅಕ್ಷಯ್ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರು, ಯಾರು ಕೂಡ ಮೃತ ಶೈಲಾ ಸಹಾಯಕ್ಕೆ ಧಾವಿಸಿಲ್ಲ ಅನ್ನೋದು ವಿಪರ್ಯಾಸ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ್ ಜಾಧವನನ್ನು ಅಫಜಲಪುರ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆದರೆ ಹಾಡುಹಗಲೇ ಹತ್ಯೆ ನಡೆಯುತ್ತಿದ್ದರೂ ಸ್ಥಳೀಯರು ಮಾತ್ರ ಕಂಡು ಕಾಣದಂತೆ ವರ್ತಿಸಿದ್ದು ನಿಜಕ್ಕೂ ವಿಪರ್ಯಾಸ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am