ಬ್ರೇಕಿಂಗ್ ನ್ಯೂಸ್
27-03-26 03:52 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 27: ನಗರದಲ್ಲಿ ಹಾಡುಹಗಲೇ ನಡೆದ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಅಫಜಲಪುರ ತಾಲ್ಲೂಕಿನ ಬಳುರಗಿ ಬಳಿ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿ ಬಳಿಕ ಶವದ ಮೇಲೆ ಕಾರು ಹತ್ತಿಸಿ ಭೀಕರತೆ ಮೆರೆದಿದ್ದಾನೆ.
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ನಡುರಸ್ತೆಯಲ್ಲೇ ಆಕೆಯನ್ನು ಭಾರೀವಾಗಿ ಹತ್ಯೆ ಮಾಡಿದ್ದಾನೆ. ರಸ್ತೆಯಲ್ಲಿ ಹೋಗುವವರೆಲ್ಲಾ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರೂ ಆತ ಯಾವುದೇ ಅಳುಕಿಲ್ಲದೆ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರೀಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಧಾವಿಸಿಲ್ಲ ಎಂಬುದು ವಿಪರ್ಯಾಸ.
ಕುಡುಗೋಲಿನಿಂದ ಕತ್ತು ಕತ್ತರಿಸಿದ ಭೂಪ!
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ಆಕೆಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಕತ್ತನ್ನು ಕತ್ತರಿಸಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದ ಮಹಿಳೆ ನೋಡ ನೋಡುತ್ತಲೇ ಪ್ರಾಣಿ ಬಿಟ್ಟಿದ್ದಾಳೆ. ಈ ಭೀಕರ ಹತ್ಯೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ.
ಪತ್ನಿಯನ್ನು ಕೊಂದ ಬಳಿಕವೂ ಸುಮ್ಮನಾಗದ ಕಿರಾತಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ಮಹಾರಾಷ್ಟ್ರದ ಬಾರಾಮತಿಯಿಂದ ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ಪತ್ನಿಯನ್ನು ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಆದರೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ್ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಭಾರೀವಾಗಿ ಹತ್ಯೆ ಮಾಡಿದ್ದಾನೆ.
ಘಟನೆ ನಡೆದ ವೇಳೆ ಕಾರಿನಲ್ಲಿ ಅಕ್ಷಯ್ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರು, ಯಾರು ಕೂಡ ಮೃತ ಶೈಲಾ ಸಹಾಯಕ್ಕೆ ಧಾವಿಸಿಲ್ಲ ಅನ್ನೋದು ವಿಪರ್ಯಾಸ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ್ ಜಾಧವನನ್ನು ಅಫಜಲಪುರ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆದರೆ ಹಾಡುಹಗಲೇ ಹತ್ಯೆ ನಡೆಯುತ್ತಿದ್ದರೂ ಸ್ಥಳೀಯರು ಮಾತ್ರ ಕಂಡು ಕಾಣದಂತೆ ವರ್ತಿಸಿದ್ದು ನಿಜಕ್ಕೂ ವಿಪರ್ಯಾಸ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm