ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm