ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm