ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm