ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm