ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am