ಬ್ರೇಕಿಂಗ್ ನ್ಯೂಸ್
02-04-26 02:46 pm HK News Staffer ಕರ್ನಾಟಕ
ಜಾರ್ಖಂಡ್, ಏಪ್ರಿಲ್ 02: ಮಗನ ಅನಾರೋಗ್ಯ ಗುಣಪಡಿಸಲು ಮೂಢನಂಬಿಕೆಗೆ ಒಳಗಾಗಿ ತಾಯಿ ತಾನು ಹೆತ್ತ ಮಗಳನ್ನೇ ಬಲಿಕೊಟ್ಟ ಭೀಕರ ಘಟನೆ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಹಾಗೂ ಮಾಂತ್ರಿಕ ಎಂದು ಹೇಳಿಕೊಂಡಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ದಿನ ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಯಿತಾದರೂ, ತನಿಖೆ ಮುಂದುವರಿದಂತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಯಿತು. ತನಿಖೆಯಲ್ಲಿ ತಾಯಿಯೇ ಈ ಕೃತ್ಯದ ಮೂಲ ಕಾರಣ ಎಂಬುದು ಬಹಿರಂಗವಾಯಿತು. ‘ಭಗ್ತಿನ್’ ಎಂದು ಕರೆಯಲ್ಪಡುವ ಶಾಂತಿ ದೇವಿ ಎಂಬ ಮಹಿಳೆ, ಮಗನ ರೋಗ ಗುಣವಾಗಲು ನರಬಲಿ ನೀಡಬೇಕೆಂದು ಹೇಳಿದ್ದಾಳೆ. ಇದನ್ನು ನಂಬಿದ ತಾಯಿ ಕಳೆದ ಮೂರು ತಿಂಗಳಿಂದ ಆಕೆಯ ಸಂಪರ್ಕದಲ್ಲಿದ್ದಳು.
ಪೂಜೆಯ ನೆಪದಲ್ಲಿ ತಾಯಿ ತನ್ನ ಪ್ರಿಯಕರ ಭೀಮ್ ರಾಮ್ ಜೊತೆ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದುಕೊಂಡು ಹೋಗಿದ್ದು, ನಂತರ ಹತ್ತಿರದ ಬಿದಿರಿನ ತೋಪಿಗೆ ಕರೆದೊಯ್ದು ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮ್ ರಾಮ್ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದರೆ, ತಾಯಿ ಮಗುವಿನ ಕಾಲುಗಳನ್ನು ಹಿಡಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಗುಪ್ತಾಂಗಗಳೊಳಗೆ ಮರದ ಕೋಲನ್ನು ಹಾಕಿದ್ದಾರೆ. ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತವನ್ನು ತೆಗೆದುಕೊಂಡಿದ್ದಾನೆ. ನಂತರ ಶವವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಮೂವರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂಢನಂಬಿಕೆ ಮತ್ತು ಕುರುಡು ಆಚರಣೆಗಳಿಂದ ಉಂಟಾಗುವ ಅಪಾಯಗಳಿಗೆ ಈ ಘಟನೆ ಭೀಕರ ಉದಾಹರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm