ಬ್ರೇಕಿಂಗ್ ನ್ಯೂಸ್
02-04-26 02:46 pm HK News Staffer ಕರ್ನಾಟಕ
ಜಾರ್ಖಂಡ್, ಏಪ್ರಿಲ್ 02: ಮಗನ ಅನಾರೋಗ್ಯ ಗುಣಪಡಿಸಲು ಮೂಢನಂಬಿಕೆಗೆ ಒಳಗಾಗಿ ತಾಯಿ ತಾನು ಹೆತ್ತ ಮಗಳನ್ನೇ ಬಲಿಕೊಟ್ಟ ಭೀಕರ ಘಟನೆ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಹಾಗೂ ಮಾಂತ್ರಿಕ ಎಂದು ಹೇಳಿಕೊಂಡಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ದಿನ ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಯಿತಾದರೂ, ತನಿಖೆ ಮುಂದುವರಿದಂತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಯಿತು. ತನಿಖೆಯಲ್ಲಿ ತಾಯಿಯೇ ಈ ಕೃತ್ಯದ ಮೂಲ ಕಾರಣ ಎಂಬುದು ಬಹಿರಂಗವಾಯಿತು. ‘ಭಗ್ತಿನ್’ ಎಂದು ಕರೆಯಲ್ಪಡುವ ಶಾಂತಿ ದೇವಿ ಎಂಬ ಮಹಿಳೆ, ಮಗನ ರೋಗ ಗುಣವಾಗಲು ನರಬಲಿ ನೀಡಬೇಕೆಂದು ಹೇಳಿದ್ದಾಳೆ. ಇದನ್ನು ನಂಬಿದ ತಾಯಿ ಕಳೆದ ಮೂರು ತಿಂಗಳಿಂದ ಆಕೆಯ ಸಂಪರ್ಕದಲ್ಲಿದ್ದಳು.
ಪೂಜೆಯ ನೆಪದಲ್ಲಿ ತಾಯಿ ತನ್ನ ಪ್ರಿಯಕರ ಭೀಮ್ ರಾಮ್ ಜೊತೆ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದುಕೊಂಡು ಹೋಗಿದ್ದು, ನಂತರ ಹತ್ತಿರದ ಬಿದಿರಿನ ತೋಪಿಗೆ ಕರೆದೊಯ್ದು ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮ್ ರಾಮ್ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದರೆ, ತಾಯಿ ಮಗುವಿನ ಕಾಲುಗಳನ್ನು ಹಿಡಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಗುಪ್ತಾಂಗಗಳೊಳಗೆ ಮರದ ಕೋಲನ್ನು ಹಾಕಿದ್ದಾರೆ. ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತವನ್ನು ತೆಗೆದುಕೊಂಡಿದ್ದಾನೆ. ನಂತರ ಶವವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಮೂವರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂಢನಂಬಿಕೆ ಮತ್ತು ಕುರುಡು ಆಚರಣೆಗಳಿಂದ ಉಂಟಾಗುವ ಅಪಾಯಗಳಿಗೆ ಈ ಘಟನೆ ಭೀಕರ ಉದಾಹರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm