ಬ್ರೇಕಿಂಗ್ ನ್ಯೂಸ್
02-04-26 03:56 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 2: ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಬಕೆಟ್ಗೆ ಬಿದ್ದು ಸಾವನ್ನಪ್ಪಿದ ಘಟನೆಯಿಂದ ಮನನೊಂದ ತಾಯಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.
ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಮಹಿಳೆ. ಅಗಸ್ತ್ಯ ಮೃತಪಟ್ಟ ಎರಡು ವರ್ಷದ ಮಗು. ಪ್ರತಿಭಾ ಮತ್ತು ಅವರ ಪತಿ ಮಹಂತೇಶ್ ಇಬ್ಬರೂ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದು, ಪ್ರತಿಭಾ ಅವರು ಮನೆಯಿಂದಲೇ ಕೆಲಸ ಮಾಡುತ್ತಿದ್ದರು.
ಏಪ್ರಿಲ್ 1ರಂದು ಮನೆಯಲ್ಲಿ ತಾಯಿ ಮತ್ತು ಮಗು ಇಬ್ಬರೇ ಇದ್ದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಪ್ರತಿಭಾ ಅವರು ಒಣಹಾಕಿದ್ದ ಬಟ್ಟೆಗಳನ್ನು ತರಲು ಟೆರೇಸ್ಗೆ ಹೋಗಿದ್ದ ವೇಳೆ, ಆಟವಾಡುತ್ತಿದ್ದ ಮಗು ಅಗಸ್ತ್ಯ ಬಚ್ಚಲು ಮನೆಗೆ ಹೋಗಿದ್ದು ನೀರು ತುಂಬಿದ್ದ ಬಕೆಟ್ಗೆ ಬಿದ್ದಿದೆ. ಉಸಿರುಗಟ್ಟಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಟೆರೇಸ್ನಿಂದ ವಾಪಸ್ ಬಂದ ತಾಯಿಗೆ ಮಗುವಿನ ಸ್ಥಿತಿ ಕಂಡು ತೀವ್ರ ಆಘಾತವಾಗಿದೆ. ತನ್ನ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂಬ ಅಪರಾಧ ಪ್ರಜ್ಞೆಯಿಂದ ಪ್ರತಿಭಾ ಅವರು ತೀವ್ರವಾಗಿ ನೊಂದಿದ್ದಾರೆ.
ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದ ಪತಿ ಮಹಂತೇಶ್, ಪತ್ನಿ ಬಾಗಿಲು ತೆಗೆಯದಿದ್ದಾಗ ಪರ್ಯಾಯ ಕೀ ಬಳಸಿ ಒಳಬಂದಿದ್ದಾರೆ. ಈ ವೇಳೆ ಪ್ರತಿಭಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗುವನ್ನು ಹಾಸಿಗೆಯ ಮೇಲೆ ಮಲಗಿಸಲಾಗಿತ್ತು. ಸ್ಥಳದಲ್ಲಿ ಪತ್ತೆಯಾದ ಡೆತ್ನೋಟ್ನಲ್ಲಿ, “ನನ್ನ ಮಗುವನ್ನು ಉಳಿಸಿಕೊಳ್ಳಲು ನನಗಾಗಲಿಲ್ಲ, ಮಗುವಿನ ಸಾವಿಗೆ ನಾನೇ ಕಾರಣ” ಎಂದು ಬರೆದಿರುವುದು ತಿಳಿದುಬಂದಿದೆ. ಮಗುವಿನ ಸಾವಿನ ನಂತರ ಪ್ರತಿಭಾ ಅವರು ಮೊದಲು 15ಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿ ಹಾಗೂ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೊನೆಗೆ ರಕ್ತ ಬಾರದಿದ್ದಾಗ ನೇಣಿಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm