ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm