ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
02-04-26 08:07 pm
HK News Staffer
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm