ಬ್ರೇಕಿಂಗ್ ನ್ಯೂಸ್
02-04-26 08:03 pm HK News Staffer ಕರ್ನಾಟಕ
ಚೆನ್ನೈ, ಎಪ್ರಿಲ್ 2: ತಮಿಳುನಾಡು ಅಸೆಂಬ್ಲಿ ಚುನಾವಣೆಗೆ 44 ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿರುವ ನಾಮಪತ್ರಗಳಲ್ಲಿ ಹೆಚ್ಚಿನವು ಕ್ರಿಸ್ತಿಯನ್ ಮತಾಂತರಗೊಂಡವದ್ದಾಗಿದ್ದು ಈ ಬಗ್ಗೆ ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಧರ್ಮಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚಿಗೆ, ಹಿಂದು, ಬೌದ್ಧ, ಸಿಖ್ ಹೊರತುಪಡಿಸಿ ಬೇರಾವುದೇ ಧರ್ಮ ಅನುಸರಿಸುವವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಬಾರದೆಂಬ ತೀರ್ಪನ್ನು ಆಧರಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ. ಹಿಂದು ಮಕ್ಕಳ್ ಕಚ್ಚಿ ಪಕ್ಷದ ಅರ್ಜುನ್ ಸಂಪತ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
1950ರ ಸಂವಿಧಾನದ (ಪರಿಶಿಷ್ಟ ಜಾತಿಗಳು) 3ನೇ ಕಲಮ್ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಅನುಸರಿಸುವವರು ಮಾತ್ರ ಪರಿಶಿಷ್ಟ ಜಾತಿಗೆ ಸೇರುತ್ತಾರೆ. ಇತರ ಧರ್ಮಗಳಿಗೆ ಮತಾಂತರಗೊಂಡವರು ಈ ಸ್ಥಾನಮಾನಕ್ಕೆ ಅರ್ಹರಲ್ಲ. ಸಂವಿಧಾನದ ಇದೇ ಆಶಯವನ್ನು 2026 ಮಾರ್ಚ್ 26ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿತ್ತು. "ಪರಿಶಿಷ್ಟ ಜಾತಿಯ ಸ್ಥಾನಮಾನವು ಕೇವಲ ಹಿಂದು, ಸಿಖ್ ಮತ್ತು ಬೌದ್ಧ ಧರ್ಮದವರಿಗೆ ಮಾತ್ರ ಸೀಮಿತವಾಗಿದೆ. ವೈಯಕ್ತಿಕ ಅಥವಾ ಸಾಮಾಜಿಕ ಕಾರಣಗಳಿಗಾಗಿ ಬೇರೆ ಧರ್ಮಕ್ಕೆ ಮತಾಂತರಗೊಂಡವರು ಈ ಸಾಂವಿಧಾನಿಕ ಸೌಲಭ್ಯವನ್ನು ಪಡೆಯಲು ಸಾಧ್ಯವಿಲ್ಲ" ಎಂದು ನ್ಯಾಯಾಲಯ ಹೇಳಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಜಾತಿ ಮತ್ತು ಧರ್ಮದ ಅರ್ಹತೆಯನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಎಲ್ಲ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗಿದೆ. ಮಾಹಿತಿ ಪ್ರಕಾರ, 44 ಮೀಸಲು ಕ್ಷೇತ್ರಗಳಲ್ಲಿ 90 ಶೇಕಡಾ ಮಂದಿ ಕ್ರಿಸ್ತಿಯನ್ ಮತಾಂತರ ಆದವರು ನಾಮಪತ್ರ ಸಲ್ಲಿಸಿದ್ದಾರೆ. ಕಾನೂನು ಪ್ರಕಾರ, ಮೀಸಲು ಕ್ಷೇತ್ರದಲ್ಲಿ ಈ ರೀತಿಯ ಕಾನೂನು ಉಲ್ಲಂಘನೆಯನ್ನು ಮಾನ್ಯ ಮಾಡುವುದು ತಪ್ಪಾಗುತ್ತದೆ ಎಂದು ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಜುನ್ ಸಂಪತ್ ಒತ್ತಾಯಿಸಿದ್ದಾರೆ. ಚುನಾವಣೆ ಸಮಯದಲ್ಲೇ ಇಂತಹ ಬೇಡಿಕೆ ಎತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm