ಬ್ರೇಕಿಂಗ್ ನ್ಯೂಸ್
02-04-26 08:07 pm HK News Staffer ಕರ್ನಾಟಕ
ವಿಜಯಪುರ, ಎಪ್ರಿಲ್ 2: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ. ಇವರ ಬದಲಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ. ರಾಜ್ಯದಲ್ಲಿ ಯೋಗಿ ರೀತಿ ಆಡಳಿತ ಕೊಡುತ್ತೇನೆ ಎಂದು ಹೇಳುವ ಧೈರ್ಯ ಬಿಜೆಪಿಯಲ್ಲಿ ಯಾರಿಗಾದ್ರೂ ಇದೆಯಾ.. ಅದನ್ನು ನಾನು ಮಾತ್ರ ಹೇಳಬಲ್ಲೆ ಎಂದು ಹೇಳಿದರು.
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
2028 ರಲ್ಲಿ ಹಿಂದೂ ಸರ್ಕಾರ ಜಾರಿಗೆ ಬಂದೇ ಬರತ್ತೆ ಎಂದು ಹೇಳಿದ ಪಾಟೀಲ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಸರ್ಕಾರದಿಂದ ಟ್ರೇನಿಂಗ್ ಕೊಡುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹಣ ಕೊಡುತ್ತಾರೆ. ಹಿಂದುಗಳಿಗೇನು ಕೊಡುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ಹಿಂದುಗಳು ಒಗ್ಗಟ್ಟಾಗುತ್ತಾರೆ. ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ. ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಆದಾಗ ಎನ್ ಕೌಂಟರ್ ಮಾಡಬೇಕಿತ್ತು. ಮುಸ್ಲಿಮರು ಮೂರು ಕಡೆ ಮೀಸಲಾತಿ ಲಾಭ ಪಡೆದುಕೊಳ್ಳುತ್ತಾರೆ. ಧರ್ಮಾಧಾರಿತ ಮೀಸಲಾತಿ ನಮ್ಮ ದೇಶದಲ್ಲಿ ಇಲ್ಲ. ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕ ಹಿಂದುಳಿದಿದೆ, ಅಂಥವರಿಗೆ ಸವಲತ್ತು ಕೊಡಬೇಕೆಂದು ಸಂವಿಧಾನದಲ್ಲಿ ಇದೆ ಎಂದು ಶಾಸಕ ಯತ್ನಾಳ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm