ಬ್ರೇಕಿಂಗ್ ನ್ಯೂಸ್
02-04-26 08:07 pm HK News Staffer ಕರ್ನಾಟಕ
ವಿಜಯಪುರ, ಎಪ್ರಿಲ್ 2: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ. ಇವರ ಬದಲಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ. ರಾಜ್ಯದಲ್ಲಿ ಯೋಗಿ ರೀತಿ ಆಡಳಿತ ಕೊಡುತ್ತೇನೆ ಎಂದು ಹೇಳುವ ಧೈರ್ಯ ಬಿಜೆಪಿಯಲ್ಲಿ ಯಾರಿಗಾದ್ರೂ ಇದೆಯಾ.. ಅದನ್ನು ನಾನು ಮಾತ್ರ ಹೇಳಬಲ್ಲೆ ಎಂದು ಹೇಳಿದರು.
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
2028 ರಲ್ಲಿ ಹಿಂದೂ ಸರ್ಕಾರ ಜಾರಿಗೆ ಬಂದೇ ಬರತ್ತೆ ಎಂದು ಹೇಳಿದ ಪಾಟೀಲ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಸರ್ಕಾರದಿಂದ ಟ್ರೇನಿಂಗ್ ಕೊಡುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹಣ ಕೊಡುತ್ತಾರೆ. ಹಿಂದುಗಳಿಗೇನು ಕೊಡುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ಹಿಂದುಗಳು ಒಗ್ಗಟ್ಟಾಗುತ್ತಾರೆ. ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ. ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಆದಾಗ ಎನ್ ಕೌಂಟರ್ ಮಾಡಬೇಕಿತ್ತು. ಮುಸ್ಲಿಮರು ಮೂರು ಕಡೆ ಮೀಸಲಾತಿ ಲಾಭ ಪಡೆದುಕೊಳ್ಳುತ್ತಾರೆ. ಧರ್ಮಾಧಾರಿತ ಮೀಸಲಾತಿ ನಮ್ಮ ದೇಶದಲ್ಲಿ ಇಲ್ಲ. ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕ ಹಿಂದುಳಿದಿದೆ, ಅಂಥವರಿಗೆ ಸವಲತ್ತು ಕೊಡಬೇಕೆಂದು ಸಂವಿಧಾನದಲ್ಲಿ ಇದೆ ಎಂದು ಶಾಸಕ ಯತ್ನಾಳ ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm