ಬ್ರೇಕಿಂಗ್ ನ್ಯೂಸ್
02-04-26 09:31 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಸುರೇಶ್ ಬಾಬು ಕೆಲವೊಂದು ಆರೋಪಗಳನ್ನು ಚಂದ್ರಶೇಖರ್ ವಿರುದ್ಧ ಮಾಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಈ ಬಗ್ಗೆ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತಮ್ಮ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಬೆದರಿಕೆ ಹಾಕುತ್ತಿರುವುದಾಗಿ ಆರೋಪಿಸಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 223 ಮತ್ತು 224 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಕುಮಾರಸ್ವಾಮಿ ಕಡೆಯಿಂದ ಹೈಕೋರ್ಟ್ ಮೆಟ್ಟಿಲೇರಿದ್ದಲ್ಲದೆ, ತಮ್ಮ ಮೇಲಿನ ಪ್ರಕರಣವನ್ನು ರದ್ದುಪಡಿಸಲು ಕೇಳಿಕೊಂಡಿದ್ದರು.
ಪ್ರಕರಣವನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾಧೀಶರು, ಇಬ್ಬರ ಪ್ರತಿಷ್ಠೆಯ ಕಾರಣಕ್ಕೆ ನೀಡಿರುವ ದೂರು ಎಂದು ಪರಿಗಣಿಸಿ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದರು. ಈಗ ಎರಡೂ ಕಡೆಯ ವಕೀಲರು ರಾಜಿ ಸಂಧಾನ ಮಾತುಕತೆಗೆ ಸಮ್ಮತಿಸಿದ್ದು, ಹೈಕೋರ್ಟ್ ರಾಜಿ ಸಂಧಾನಕ್ಕೆ ಏಪ್ರಿಲ್ 30ಕ್ಕೆ ದಿನಾಂಕ ಫಿಕ್ಸ್ ಮಾಡಿದೆ. ವಿವಾದವು ರಾಜ್ಯದ ಗಮನ ಸೆಳೆದಿದ್ದು, ರಾಜಕಾರಣಿಗಳು ಮತ್ತು ಐಪಿಎಸ್ ಅಧಿಕಾರಿ ನಡುವಿನ ಜಟಾಪಟಿ ನಗೆಪಾಟಲಿಗೆ ಕಾರಣವಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm