ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am