ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am