ಬ್ರೇಕಿಂಗ್ ನ್ಯೂಸ್
05-04-26 07:24 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 5: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಜಿ.ಎಸ್.ಶರಣ್ಯಾ (36) ನಾಪತ್ತೆಯಾಗಿ ಮೂರು ದಿನ ಕಳೆದರೂ ಆಕೆಯ ಸುಳಿವು ಸಿಗದ ಕಾರಣ ಪತ್ತೆಗಾಗಿ ಎಲ್ಲ ರೀತಿಯ ಸಾಮರ್ಥ್ಯ ಬಳಸಿಕೊಂಡು ಶೋಧ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನೊಳಗೊಂಡ ನಾಲ್ಕು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಶೋಧಕ್ಕಾಗಿ ಡ್ರೋನ್ ಕ್ಯಾಮರಾ ಬಳಸುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಒಂಬತ್ತು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಕಾಡಿನಲ್ಲಿ ಶೋಧ ಕಾರ್ಯಕ್ಕೆ ನಕ್ಸಲ್ ವಿರೋಧಿ ತಂಡವನ್ನೂ ನಿಯೋಜನೆ ಮಾಡಲಾಗಿದೆ.
ಕೋಯಿಕ್ಕೋಡ್ ನಿವಾಸಿ ಹಾಗೂ ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಕಕ್ಕಬ್ಬೆಯ ಹೋಂಸ್ಟೇಯಲ್ಲಿ ಒಬ್ಬರೇ ತಂಗಿದ್ದರು. ಏಪ್ರಿಲ್ 2ರಂದು ಬೆಳಗ್ಗೆ ಚಾರಣಕ್ಕೆಂದು ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಬಂದಿದ್ದ ಅವರನ್ನು ಸುರಕ್ಷತೆಯ ದೃಷ್ಟಿಯಿಂದ 15 ಜನರಿದ್ದ ಮತ್ತೊಂದು ಪ್ರವಾಸಿಗರ ತಂಡದೊಂದಿಗೆ ಕಳುಹಿಸಲಾಗಿತ್ತು. ಆದರೆ, ಮಧ್ಯಾಹ್ನ 1:30ಕ್ಕೆ ವಾಪಸ್ ಬರಬೇಕಿದ್ದ ಶರಣ್ಯಾ ಹಿಂದಿರುಗಿ ಬರದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಹೋಂಸ್ಟೇ ಮಾಲೀಕರು ಆಕೆಗೆ ಫೋನ್ ಮಾಡಿದಾಗ ಮೊದಲು ಸಂಪರ್ಕ ಸಿಕ್ಕಿರಲಿಲ್ಲ. ನಂತರ ಕರೆ ಸ್ವೀಕರಿಸಿದ ಶರಣ್ಯಾ, ‘ದಾರಿ ತಪ್ಪಿದ್ದೇನೆ’ ಎಂದು ಗಾಬರಿಯಿಂದ ಹೇಳಿದ್ದರು. ಅಷ್ಟರಲ್ಲೇ ಫೋನ್ ಸಂಪರ್ಕ ಕಡಿತಗೊಂಡಿದ್ದು, ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅದರ ಬೆನ್ನಲ್ಲೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರೂ ದಟ್ಟ ಅರಣ್ಯ ಮತ್ತು ಕಾಡಾನೆಗಳ ಹಾವಳಿಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆಯೂ ಬೆಟ್ಟದ ದುರ್ಗಮ ಹಾದಿಗಳಲ್ಲಿ ಶೋಧ ನಡೆಸುತ್ತಿದೆ. ಮೂರು ದಿನ ಕಳೆದರೂ ಶರಣ್ಯ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಶರಣ್ಯ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲು ಮುಂದಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am