ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm