ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm