ಬ್ರೇಕಿಂಗ್ ನ್ಯೂಸ್
06-04-26 08:51 pm HK News Staffer ಕರ್ನಾಟಕ
ಮೈಸೂರು, ಎಪ್ರಿಲ್ 6: ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿಹಾಕಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದು ಮರು ಪ್ರಶ್ನೆ ಹಾಕಿದರು.
ಹೈಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಅಂತ ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ, ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪ ಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ ಎಂದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am