ಬ್ರೇಕಿಂಗ್ ನ್ಯೂಸ್
07-04-26 12:37 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 07: ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಬೆಳಗಾವಿ ಹಾಗೂ ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ; ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ದಾಳಿ
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಅವರ ಮೆದೇಹಳ್ಳಿ ರಸ್ತೆಯಲ್ಲಿರುವ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಎಸ್ಪಿ ವಾಸುದೇವ್ ರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿ: ಮೀನುಗಾರಿಕೆ ಇಲಾಖೆ ಅಧಿಕಾರಿ ಟಾರ್ಗೆಟ್
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದೆ. ಸಿದ್ಧಾರ್ಥ್ ನಗರದಲ್ಲಿರುವ ನಿವಾಸ ಸೇರಿದಂತೆ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ: ಜಿಲ್ಲಾ ಅಧಿಕಾರಿ ನಿವಾಸ–ಕಚೇರಿ ಪರಿಶೀಲನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆದಿದೆ. ತರಲಘಟ್ಟ, ಆನಂದಪುರ ಹಾಗೂ ಚಾಲುಕ್ಯ ನಗರ ಸೇರಿ ಹಲವು ಸ್ಥಳಗಳಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಬೆಳಗಾವಿ: ಚಿನ್ನಾಭರಣ, ಕೋಟ್ಯಾಂತರ ಠೇವಣಿ ಪತ್ತೆ
ಬೆಳಗಾವಿ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಎಇಇ ಅಜಯ್ ಸಿಂಗ್ ರಜಪೂತ್ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ಒಂದು ಕೆಜಿ ಚಿನ್ನಾಭರಣ ಹಾಗೂ ಬ್ಯಾಂಕ್ನಲ್ಲಿ ಸುಮಾರು ₹2 ಕೋಟಿ ಠೇವಣಿ ಪತ್ತೆಯಾಗಿದೆ. ಬೆಳಗಾವಿ, ಅಥಣಿ ಮತ್ತು ಹುಕ್ಕೇರಿ ಸೇರಿ ಮೂರು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ.
ಮಂಡ್ಯ: ಲೋಕೋಪಯೋಗಿ ಇಲಾಖೆ ಅಧಿಕಾರಿ ವಿರುದ್ಧ ದಾಳಿ
ಮಂಡ್ಯ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಮೈಸೂರು ಕಚೇರಿ ಹಾಗೂ ಮಂಡ್ಯದ ನಿವಾಸಗಳಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm