ಬ್ರೇಕಿಂಗ್ ನ್ಯೂಸ್
07-04-26 07:26 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 7: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾರ್ಥನೆ ಸಮಯದಲ್ಲೂ ವಿಷಕಾರಿ ಹಾವು ಕಂಡರೆ ಅದನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ನಡುವಿನ ವಿಷಕಾರಿ ಹಾವುಗಳಾಗಿವೆ. ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ತೀವ್ರ ಟ್ರೋಲ್ ಆಗಿದ್ದು, ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆಕ್ಷೇಪ ಕೇಳಿಬಂದಿದೆ. ಕುರಾನ್ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್ಎಸ್ಎಸ್/ಬಿಜೆಪಿ ಕೂಡ ಅದೇ ರೀತಿಯ ಹಾವು. ನೀವು ಅವರನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಖರ್ಗೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಕಾಂಗ್ರೆಸ್ ಮೇಲೆ ಹಿಂಸೆಗೆ ಪ್ರೇರೇಪಿಸುತ್ತಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಸದಸ್ಯರ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪೂನಾವಾಲ, ಕಾಂಗ್ರೆಸ್ "ಇಂಡಿಯನ್ ಜಿಹಾದಿ ಕಾಂಗ್ರೆಸ್" ತರಹ ವರ್ತಿಸುತ್ತಿದೆ ಎಂದು ಟೀಕಿಸಿದ್ದು, ಈ ಹೇಳಿಕೆ ರಾಜಕೀಯ ವಿರೋಧಿಗಳ ವಿರುದ್ಧ ಪ್ರಚೋದನೆಗೆ ಸಮಾನವಾಗಿದೆ ಎಂದು ಹೇಳಿದರು. ಇದು ಕಾಂಗ್ರೆಸ್ನ ಅತ್ಯಂತ ಕೀಳುಮಟ್ಟ. ಇದು ಅತೀ ಅಪ್ರಜಾಸತ್ತಾತ್ಮಕ, ತುರ್ತು ಪರಿಸ್ಥಿತಿ ಮನೋಭಾವದ ಹೇಳಿಕೆ. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm