ಬ್ರೇಕಿಂಗ್ ನ್ಯೂಸ್
08-04-26 02:09 pm HK News Staffer ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 8: ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದ ಕೇರಳದ ಕುಟುಂಬದ ಜೊತೆಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕಾಡಿನ ಮಧ್ಯೆ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 15 ವರ್ಷದ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಏಪ್ರಿಲ್ 7ರ ಸಂಜೆ 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಬಾಲಕಿ ಕಾಣೆಯಾಗಿದ್ದಾಳೆ. ಬಾಲಕಿ ಕಾಣೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿ ನಾಪತ್ತೆಯಾದ ವಿಷಯ ತಿಳಿದು ಎಚ್ಚೆತ್ತ ಜಿಲ್ಲಾಡಳಿತ, ನಿನ್ನೆ ತಡರಾತ್ರಿ ವರೆಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಯಿಂದ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯ ವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಸಿಬ್ಬಂದಿ ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಶೋಧ ಕಾರ್ಯ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಹುಡುಕಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶ ಇರುವುದರಿಂದ ಬಾಲಕಿಯನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಶೋಧ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿದ್ದ ಕೇರಳದ ಯುವತಿ ಶರಣ್ಯ ನಾಪತ್ತೆಯಾಗಿ ನಾಲ್ಕು ದಿನ ಕಾಡಿನಲ್ಲಿ ಅಂಡಲೆದು ಬಳಿಕ ಸ್ಥಳೀಯ ಮಲೆಕುಡಿಯ ಜನರಿಗೆ ಸಿಕ್ಕಿದ್ದರು. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಎಡವಟ್ಟು ಉಂಟಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm