ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am