ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm