ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm