ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm