ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am