ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm