ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am