ಬ್ರೇಕಿಂಗ್ ನ್ಯೂಸ್
13-04-26 09:49 pm HK News Staffer ಕರ್ನಾಟಕ
ಸುಳ್ಯ, ಎಪ್ರಿಲ್ 13: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ.
ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ ನಿರಂತರವಾಗಿ ಬೊಬ್ಬೆ ಹಾಕಿದ್ದನ್ನು ಕೇಳಿ ಏನೋ ಸಂಭವಿಸಿದೆ ಎಂದು ಸಂಶಯ ಮೂಡಿತ್ತು. ಸ್ಥಳೀಯರು ಬಳಿಕ ತೋಟದಲ್ಲಿ ನೋಡಿದಾಗ ಕಾಡಾನೆಯೊಂದು 30 ಅಡಿ ಆಳದ ಪಾಳು ಬಾವಿಯಲ್ಲಿ ಬಿದ್ದಿರೋದು ಕಾಣಿಸಿದೆ. ತಕ್ಷಣವೇ ಸ್ಥಳೀಯ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿತ್ತು.





ಬಾವಿ ಎತ್ತರದ ಭಾಗದಲ್ಲಿದ್ದು, ಅಡ್ಡಲಾಗಿ ಹೊಂಡ ತೋಡಿಯೇ ಆನೆಯನ್ನು ರಕ್ಷಿಸಲು ಸಾಧ್ಯ ಎಂದು ಮನಗಂಡ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಸಮನಾಗಿ ಜೆಸಿಬಿಯಿಂದ ಮಣ್ಣು ಕೊರೆದು ಆ ಮೂಲಕ ಆನೆಯನ್ನು ಬಾವಿಯಿಂದ ಹೊರ ತೆಗೆಯಲು ಪ್ಲಾನ್ ಮಾಡಲಾಗಿತ್ತು. ಅದರಂತೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿದ್ದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಂಡಿದೆ. ಆನೆಯನ್ನು ಬಾವಿಯಿಂದ ನೇರವಾಗಿ ಕಾಡಿಗೆ ಕಳುಹಿಸಲು ಯೋಜನೆ ಹಾಕಲಾಗಿತ್ತಾದರೂ, ಬಾವಿಯಿಂದ ಹೊರ ಬಂದ ಆನೆ ನೇರವಾಗಿ ಮೊದಲಿಗೆ ಅಲ್ಲಿದ್ದ ಜೆಸಿಬಿಯನ್ನೇ ಟಾರ್ಗೆಟ್ ಮಾಡಿದೆ. ಬಳಿಕ ಪಕ್ಕದಲ್ಲೇ ಇದ್ದ ಕೃಷಿ ತೋಟದ ಮಧ್ಯೆ ಓಡಿ ಮರೆಯಾಗಿದೆ.
ಆನೆಯನ್ನು ಪಟಾಕಿ ಸಿಡಿಸುವ ಮೂಲಕ ಕೃಷಿ ತೋಟದಿಂದ ಪೂವಾಜೆ ರಕ್ಷಿತಾರಣ್ಯಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿದ್ದಾರೆ. ಸುಮಾರು 150 ಕ್ಕೂ ಮಿಕ್ಕಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm