ಬ್ರೇಕಿಂಗ್ ನ್ಯೂಸ್
13-04-26 09:49 pm HK News Staffer ಕರ್ನಾಟಕ
ಸುಳ್ಯ, ಎಪ್ರಿಲ್ 13: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ.
ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ ನಿರಂತರವಾಗಿ ಬೊಬ್ಬೆ ಹಾಕಿದ್ದನ್ನು ಕೇಳಿ ಏನೋ ಸಂಭವಿಸಿದೆ ಎಂದು ಸಂಶಯ ಮೂಡಿತ್ತು. ಸ್ಥಳೀಯರು ಬಳಿಕ ತೋಟದಲ್ಲಿ ನೋಡಿದಾಗ ಕಾಡಾನೆಯೊಂದು 30 ಅಡಿ ಆಳದ ಪಾಳು ಬಾವಿಯಲ್ಲಿ ಬಿದ್ದಿರೋದು ಕಾಣಿಸಿದೆ. ತಕ್ಷಣವೇ ಸ್ಥಳೀಯ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿತ್ತು.





ಬಾವಿ ಎತ್ತರದ ಭಾಗದಲ್ಲಿದ್ದು, ಅಡ್ಡಲಾಗಿ ಹೊಂಡ ತೋಡಿಯೇ ಆನೆಯನ್ನು ರಕ್ಷಿಸಲು ಸಾಧ್ಯ ಎಂದು ಮನಗಂಡ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಸಮನಾಗಿ ಜೆಸಿಬಿಯಿಂದ ಮಣ್ಣು ಕೊರೆದು ಆ ಮೂಲಕ ಆನೆಯನ್ನು ಬಾವಿಯಿಂದ ಹೊರ ತೆಗೆಯಲು ಪ್ಲಾನ್ ಮಾಡಲಾಗಿತ್ತು. ಅದರಂತೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿದ್ದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಂಡಿದೆ. ಆನೆಯನ್ನು ಬಾವಿಯಿಂದ ನೇರವಾಗಿ ಕಾಡಿಗೆ ಕಳುಹಿಸಲು ಯೋಜನೆ ಹಾಕಲಾಗಿತ್ತಾದರೂ, ಬಾವಿಯಿಂದ ಹೊರ ಬಂದ ಆನೆ ನೇರವಾಗಿ ಮೊದಲಿಗೆ ಅಲ್ಲಿದ್ದ ಜೆಸಿಬಿಯನ್ನೇ ಟಾರ್ಗೆಟ್ ಮಾಡಿದೆ. ಬಳಿಕ ಪಕ್ಕದಲ್ಲೇ ಇದ್ದ ಕೃಷಿ ತೋಟದ ಮಧ್ಯೆ ಓಡಿ ಮರೆಯಾಗಿದೆ.
ಆನೆಯನ್ನು ಪಟಾಕಿ ಸಿಡಿಸುವ ಮೂಲಕ ಕೃಷಿ ತೋಟದಿಂದ ಪೂವಾಜೆ ರಕ್ಷಿತಾರಣ್ಯಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿದ್ದಾರೆ. ಸುಮಾರು 150 ಕ್ಕೂ ಮಿಕ್ಕಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm