ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm