ಬ್ರೇಕಿಂಗ್ ನ್ಯೂಸ್
16-04-26 07:37 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 16: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಿ ಮತ್ತು ವಾರ್ಷಿಕ ಪರೀಕ್ಷೆಯ ಒಟ್ಟು ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟಿನಲ್ಲಿ ತೀವ್ರ ಹಿನ್ನಡೆಯಾಗಿದೆ.
ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರದ ದಿಢೀರ್ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಿರಾಳವಾದಂತಾಗಿದೆ.
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.
ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ವ್ಯತಿರಿಕ್ತ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm